ಕುಕ್ಕೆ ದೇಗುಲ ಸೇರಿದಂತೆ 14 ದೇವಳದ ಸೇವಾ ಶುಲ್ಕ ಹೆಚ್ಚಳ; ಅಕ್ಟೋಬರ್ 1ರಿಂದ ಪರಿಷ್ಕೃತ ದರ ಜಾರಿ

Kukke

 ರಾಜ್ಯದ 14 ಪ್ರಮುಖ ಮುಜರಾಯಿ ಇಲಾಖೆಯ ದೇವಾಲಯಗಳ ಸೇವಾ ಶುಲ್ಕವನ್ನು ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳು ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ.

​ಕಳೆದ ಐದು ವರ್ಷಗಳಿಂದ ಸೇವಾ ಶುಲ್ಕ ಪರಿಷ್ಕರಿಸದ ಮತ್ತು ಶುಲ್ಕ ಏರಿಕೆಗೆ ಮನವಿ ಸಲ್ಲಿಸಿದ್ದ ದೇವಾಲಯಗಳ ಸೇವಾ ದರವನ್ನು ಆಗಮ ಪಂಡಿತರ ಪರಿಶೀಲನೆಯ ನಂತರ ಶೇ. 5 ರಿಂದ 10ರವರೆಗೆ ಮತ್ತು ಕೆಲವು ದೇವಾಲಯಗಳಿಗೆ ಶೇ. 15ರವರೆಗೆ ಏರಿಕೆ ಮಾಡಿ ಮುಜರಾಯಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

​ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು, ಇದು ದೇವಾಲಯಗಳ ಆಡಳಿತ ಮಂಡಳಿಯ ನಿರ್ಧಾರವಾಗಿದ್ದು, ಸರ್ಕಾರದ ನಿರ್ಧಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಡಳಿತ ಮಂಡಳಿಗಳ ತೀರ್ಮಾನದ ಅನುಸಾರ ಇಲಾಖೆ ಆದೇಶ ಮಾಡಿದೆ ಎಂದು ಅವರು ತಿಳಿಸಿದ್ದಾರೆ.

​ಪ್ರಮುಖ ದೇವಾಲಯಗಳಲ್ಲಿ ದರ ಏರಿಕೆ

​ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಾಲಯ: 2010ರ ನಂತರ ಇದೀಗ ಸೇವಾ ಶುಲ್ಕ ಪರಿಷ್ಕರಿಸಲಾಗಿದ್ದು, ಆಶ್ಲೇಷ ಪೂಜೆ ಮತ್ತು ನಾಗರ ಪ್ರತಿಷ್ಠೆಗೆ ಇದ್ದ ತಲಾ 400 ರೂ. ಸೇವಾ ದರ 500 ರೂ.ಗೆ ಏರಿಕೆಯಾಗಿದೆ.

​ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ

​ಸೌತಡ್ಕ ಮಹಾಗಣಪತಿ ದೇವಾಲಯ

​ಮಂದಾರ್ತಿ ದುರ್ಗಾಪರಮೇಶ್ವರಿ ದೇವಾಲಯ

​ಸೇವಾ ಶುಲ್ಕ ಹೆಚ್ಚಳವಾದ ದೇವಾಲಯಗಳ ಪಟ್ಟಿ:

​ಬೆಂಗಳೂರು ನಗರ: ಮಲ್ಲೇಶ್ವರದ ಯೋಗ ನರಸಿಂಹಸ್ವಾಮಿ, ನಂದಿ ತೀರ್ಥ, ಮಹಾಗಣಪತಿ ದೇವಾಲಯ.

​ಚಿಕ್ಕಬಳ್ಳಾಪುರ: ವಿಧುರಾಶ್ವಥ ನಾರಾಯಣ ಸ್ವಾಮಿ ಮತ್ತು ತಲಕಾಯ ಬೆಟ್ಟದ ವೆಂಕಟರಮಣ ದೇವಾಲಯ.

​ದಕ್ಷಿಣ ಕನ್ನಡ: ಪುತ್ತೂರಿನ ಮಹಾಲಿಂಗೇಶ್ವರ, ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ ಮಹಾಗಣಪತಿ ಮತ್ತು ಮಾರಾಳಿಯ ಸೂರ್ಯನಾರಾಯಣ ಸ್ವಾಮಿ ದೇವಾಲಯ.

​ಬೆಂಗಳೂರು ದಕ್ಷಿಣ (ರಾಮನಗರ): ದೇವರ ಹೊಸಹಳ್ಳಿಯ ಆಂಜನೇಯ ಸ್ವಾಮಿ ದೇವಾಲಯ.

​ಚಿತ್ರದುರ್ಗ: ಹೊಸದುರ್ಗ ತಾಲೂಕಿನ ದೇವಪೂರುವಿನ ಹಾಲು ರಾಮೇಶ್ವರ ದೇವಾಲಯ.

​ರಾಯಚೂರು: ದೇವಸೂಗೂರಿನ ಸೂಗೂರೇಶ್ವರ ಸ್ವಾಮಿ ದೇವಾಲಯ.

​ಉಡುಪಿ: ಬ್ರಹ್ಮಾವರ ತಾಲೂಕಿನ ಮಂದಾರ್ತಿಯ ದುರ್ಗಾಪರಮೇಶ್ವರಿ ದೇವಾಲಯ.

​ಕೊಪ್ಪಳ: ಹುಲಿಗಿಯ ಹುಲಿಗೆಮ್ಮ ದೇವಾಲಯ.

​ಮಂಡ್ಯ: ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ದೇವಾಲಯ.


ಜಾಹೀರಾತುಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Post a Comment

0 Comments