ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ 2025-26ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿ ಬ್ರಾಹ್ಮಣ ಸಮುದಾಯದವರಿಗೆ ಸ್ವಂತ ಉದ್ಯಮ ಆರಂಭಿಸಲು ಆರ್ಥಿಕ ಸಹಾಯ ನೀಡಲಾಗುತ್ತದೆ.
ಈ ಯೋಜನೆಯ ಮುಖ್ಯ ಉದ್ದೇಶ, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಂತ ಉದ್ಯೋಗಗಳನ್ನು ಪ್ರಾರಂಭಿಸಲು ನೆರವು ನೀಡುವುದು. ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಮತ್ತು ಟ್ಯಾಕ್ಸಿ ಮುಂತಾದ ವ್ಯವಹಾರಗಳನ್ನು ಆರಂಭಿಸಲು ಈ ಸಾಲ ಲಭ್ಯವಿದೆ.
ಯೋಜನೆಯ ಪ್ರಮುಖಾಂಶಗಳು:
ಸಾಲದ ಮೊತ್ತ: ಕನಿಷ್ಠ 1 ಲಕ್ಷ ರೂ. ಮತ್ತು ಗರಿಷ್ಠ 2 ಲಕ್ಷ ರೂ.
ಬಡ್ಡಿ ದರ: ವಾರ್ಷಿಕ ಶೇ. 4.
ಅರ್ಹತೆಗಳು:
ಅರ್ಜಿದಾರರು ಬ್ರಾಹ್ಮಣ ಸಮುದಾಯದವರಾಗಿರಬೇಕು ಮತ್ತು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (EWS) ಹೊಂದಿರಬೇಕು. (8 ಲಕ್ಷ ರೂ. ಆದಾಯ ಮಿತಿ)
ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ವಯಸ್ಸು 18 ರಿಂದ 65 ವರ್ಷದೊಳಗಿರಬೇಕು.
ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅವಕಾಶ.
ಮಹಿಳೆಯರಿಗೆ ಶೇ. 33 ಮತ್ತು ವಿಶೇಷಚೇತನರಿಗೆ ಶೇ. 5 ಮೀಸಲಾತಿ ಇದೆ.
ಅರ್ಜಿದಾರರ ಆಧಾರ್ ಸಂಖ್ಯೆಯು ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿರಬೇಕು.
ಅರ್ಜಿ ಸಲ್ಲಿಸಲು ಅಕ್ಟೋಬರ್ 31, 2025 ಕೊನೆಯ ದಿನ. ಅರ್ಜಿದಾರರು ksbdb.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ, 8762249230 ಸಹಾಯವಾಣಿಗೆ ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ ಕರೆ ಮಾಡಬಹುದು.
ಜಾಹೀರಾತುಗಾಗಿ ಸಂಪರ್ಕಿಸಿ:
ನಮ್ಮ ವೆಬ್ಸೈಟ್ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp
0 Comments