ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಮೀನು ಹಿಡಿಯುವ ವೇಳೆ ದುರಂತ: ನೀರು ಪಾಲಾಗಿ ಮೀನುಗಾರ ಸಾವು

 

Ad

ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು, ಮೀನುಗಾರಿಕೆಗೆ ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ‌ ಘಟನೆ ನಡೆದಿದೆ.

ಮೃತರನ್ನು ಸ್ಥಳೀಯರಾದ ಮನೋಹರ್ ಪುತ್ರನ್ (53) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಸುಮಾರು 6:30ರ ವೇಳೆಗೆ ಮನೋಹರ್ ಅವರು ಮೀನು ಹಿಡಿಯಲು ಬಲೆ ಬೀಸಲು ಹೋಗಿದ್ದರು. ಈ ಸಂದರ್ಭದಲ್ಲಿ ಆಯತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

Ad

ಘಟನೆ ನಡೆದ ಕೂಡಲೇ ಸ್ಥಳೀಯರು ಮತ್ತು ಪಣಂಬೂರು ಪೊಲೀಸ್ ಠಾಣೆಯ ಅಧಿಕಾರಿಗಳು ತಕ್ಷಣ ಶೋಧ ಕಾರ್ಯಾಚರಣೆಯನ್ನು ಕೈಗೊಂಡರು.ರಾತ್ರಿ ಸುಮಾರು 9:30ರ ಸುಮಾರಿಗೆ ಅವರ ಮೃತದೇಹವು ಪತ್ತೆಯಾಯಿತು.

ಈ ಘಟನೆಗೆ ಸಂಬಂಧಿಸಿದಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Post a Comment

0 Comments