ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಮತ್ತು ಶಿಕ್ಷಣ ಕೊಟ್ಟವರು, ಧಾರ್ಮಿಕ ಶಕ್ತಿ ಕೊಟ್ಟವರು, ಬ್ಯಾಂಕ್ ವ್ಯವಸ್ಥೆ ಕೊಟ್ಟವರು ಕರಾವಳಿ ಜನ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕರಾವಳಿ ಭಾಗದ ಜನತೆ ಮುಂದಿದ್ದಾರೆ. ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ಸರ್ಕಾರವಿದೆ. ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನ ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮವನ್ನು ರೂಪಿಸುತ್ತೇವೆ ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.
ಕರಾವಳಿ ಜನತೆಯ ಉದ್ಯೋಗಕ್ಕಾಗಿ ಬೇರೆಡೆ ಹೋಗುವುದನ್ನು ತಪ್ಪಿಸಿ ಅಲ್ಲೆ ಉದ್ಯೋಗ ಸೃಷ್ಟಿಯಾಗುವಂತೆ ಮಾಡಬೇಕಾಗಿದೆ ಎಂದು ಡಿ ಕೆ ಶಿವಕುಮಾರ್ ಈ ಹಿಂದೆ ಕೂಡ ಸಾಕಷ್ಟು ಬಾರಿ ಹೇಳಿದ್ದರು.
ಜಾಹೀರಾತುಗಾಗಿ ಸಂಪರ್ಕಿಸಿ:
ನಮ್ಮ ಸತ್ಯಪಥ ಸುದ್ದಿ ಪ್ಲಸ್ ವೆಬ್ಸೈಟ್ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ನೀವು ಬಯಸುವಿರಾ?
https://sathyapathanewsplus.blogspot.com
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 9880834166 / WhatsApp

.jpg)
0 Comments