ದೀಪಾವಳಿ ಅಲಂಕಾರ ವೇಳೆ ವಿದ್ಯುತ್ ಶಾಕ್ – ಯುವಕನ ದುರ್ಮರಣ


 

ಸೀತಾಂಗೋಳಿ ಸಮೀಪದ ಪುತ್ತಿಗೆ ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ದುರ್ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.


ಮೃತರನ್ನು ಪುತ್ತಿಗೆ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ (37) ಎಂದು ಗುರುತಿಸಲಾಗಿದೆ. ಅವರು ಬಡಗಿ ವೃತ್ತಿ ನಿರ್ವಹಿಸುತ್ತಿದ್ದರು.


ದೀಪಾವಳಿ ಹಬ್ಬದ ಅಂಗವಾಗಿ ಮನೆಯ ಅಂಗಳದಲ್ಲಿ ಅಲಂಕಾರಕ್ಕಾಗಿ ವಿದ್ಯುತ್ ದೀಪಗಳನ್ನು ಅಳವಡಿಸುತ್ತಿದ್ದ ವೇಳೆ ಶಾಕ್ ತಗುಲಿ ಅವರು ಗಂಭೀರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.


ಘಟನೆಯ ಕುರಿತು ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


For Advertisement Contact:


Would you like to promote your business, service, or product on our sathyapatha news plus website?


https://sathyapathanewsplus.blogspot.com


Please contact for advertisements: 9880834166 / WhatsApp



Post a Comment

0 Comments