ಕಣಿವೆಗೆ ಉರುಳಿದ ಕಾರು: ಪ್ರಯಾಣಿಕರು ಪವಾಡ ಸದೃಶವಾಗಿ ಪಾರು; ರಸ್ತೆ ಸುರಕ್ಷತೆ ಬಗ್ಗೆ ಸ್ಥಳೀಯರ ಆತಂಕ

 

Ad
ಸುಮಾರು 80 ಅಡಿ ಆಳದ ಕಣಿವೆಗೆ ಕಾರೊಂದು ಬಿದ್ದ ಘಟನೆ ಪುತ್ತೂರು–ಕಾಣಿಯೂರು–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

Ad

ಕಾರು ಚಾಲಕ ಮತ್ತು ಪ್ರಯಾಣಿಕರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಅವರನ್ನು ತಕ್ಷಣವೇ ಪುತ್ತೂರಿನ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ತಕ್ಷಣ ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ನೆರವಾದರು.

ಘಟನೆಯ ಬಳಿಕ ಸ್ಥಳೀಯರು ಕಣಿವೆಯ ಆಳ ಹಾಗೂ ರಸ್ತೆ ಸುರಕ್ಷತಾ ಕ್ರಮಗಳ ಕೊರತೆ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.


For Advertisement Contact:


Would you like to promote your business, service, or product on our sathyapatha news plus website?

https://sathyapathanewsplus.blogspot.com

Please contact for advertisements: 9880834166 / WhatsApp

Post a Comment

0 Comments