ಪುತ್ತೂರು: ಪುತ್ತೂರು ಮತ್ತು ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಬರೆಪ್ಪಾಡಿ ರಸ್ತೆಯಲ್ಲಿ ನಿರ್ಮಾಣವಾಗಿದ್ದ ದೊಡ್ಡ ಗುಂಡಿ ಸಾರ್ವಜನಿಕರಿಗೆ ಭಾರೀ ತೊಂದರೆಯನ್ನುಂಟು ಮಾಡುತ್ತಿದೆ. ಕಳೆದ ದಿನ, ನವೆಂಬರ್ 3ರಂದು ಇದೇ ಅಪಾಯಕಾರಿ ಹೊಂಡಕ್ಕೆ ಬೈಕ್ ಮತ್ತು ಸ್ಕೂಟಿಗಳು ಬಿದ್ದು, ಸವಾರರು ಆತಂಕಕ್ಕೆ ಒಳಗಾಗಿದ್ದರು.
ನಿರಂತರವಾಗಿ ಸಂಭವಿಸುತ್ತಿರುವ ಅಪಘಾತಗಳು ಮತ್ತು ಸಾರ್ವಜನಿಕರ ಸಂಕಷ್ಟವನ್ನು ಗಮನಿಸಿದ ಸ್ಥಳೀಯ ಸಂಘಟನೆಗಳು ಮತ್ತು ಯುವಕರು ಸ್ವಯಂಪ್ರೇರಿತರಾಗಿ ರಸ್ತೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ, ಯಾವುದೇ ಅನಾಹುತಗಳು ಸಂಭವಿಸುವುದನ್ನು ತಪ್ಪಿಸಲು ಸ್ಥಳೀಯರೇ ಹೊಂಡಕ್ಕೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದಾರೆ. ಹೊಂಡದಲ್ಲಿ ಗಿಡ ನೆಟ್ಟು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಸ್ಥಳೀಯರು, ರಸ್ತೆ ನಿರ್ವಹಣೆಗೆ ಜವಾಬ್ದಾರರಾಗಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp

0 Comments